ಸುಬ್ರಹ್ಮಣ್ಯನ ಬ್ರಹ್ಮರಥವನ್ನು ಕಲ್ಲಡ್ಕ ಶ್ರೀ ಶಾರದ ಸೇವಾ ಪ್ರತಿಷ್ಠಾನ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಕಲ್ಲಡ್ಕ ಕೆಳಗಿನಪೇಟೆಯಲ್ಲಿ ಬರಮಾಡಿಕೊಳ್ಳಲಾಯಿತು. ಅಲ್ಲಿಂದ ಶ್ರೀರಾಮಮಂದಿರದವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದ ರಥಕ್ಕೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.
ಜಾಹೀರಾತು
ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಆಡಳಿತ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ ಪ್ರಭಾಕರ ಭಟ್ ಮತ್ತು ಪ್ರತಿಷ್ಠಾನದ ವಜ್ರನಾಥ ಕಲ್ಲಡ್ಕ ಅವರಿಗೆ ಶಾಲು ಹೊದೆಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ರಾಮ ವಿದ್ಯಾ ಕೇಂದ್ರದ ಅಧ್ಯಕ್ಷ ನಾರಾಯಣ ಸೋಮಾಯಾಜಿ, ಸಂಚಾಲಕ ವಸಂತ ಮಾಧವ, ರವಿರಾಜ್, ಕಮಲ ಪ್ರಭಾಕರ ಭಟ್, ದಿನೇಶ್ ಅಮ್ಟೂರು, ಪ್ರತಿಷ್ಠಾನದ ನರಸಿಂಹ ಮಡಿವಾಳ, ಚೀ. ರಮೇಶ್, ಯತೀನ್ ಕುಮಾರ್ ಏಳ್ತೀಮಾರು, ಚಿದಾನಂದ ಆಚಾರ್ಯ, ಸತೀಶ್ ಆಚಾರ್ಯ, ನಾಗರಾಜ ಬಲ್ಯಾಯ, ಶೇಖರ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸುಬ್ರಹ್ಮಣ್ಯನ ಬ್ರಹ್ಮರಥಕ್ಕೆ ಕಲ್ಲಡ್ಕದಲ್ಲಿ ಸ್ವಾಗತ"