ಗ್ರಾಮೀಣ ಮಟ್ಟದಲ್ಲೂ ವಾಲ್ಮೀಕಿ ಸಂದೇಶ ರವಾನೆ: ರಾಜೇಶ್ ನಾಯ್ಕ್

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಗ್ರಾಮಮಟ್ಟದಲ್ಲಿ ನಡೆದರಷ್ಟೇ ಗ್ರಾಮೀಣ ಪ್ರದೇಶಗಳಲ್ಲಿ ವಾಲ್ಮೀಕಿ ಸಂದೇಶ ರವಾನೆಯಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ ನಾಯ್ಕ್ ಯು. ಹೇಳಿದರು.

www.bantwalnews.com Editor: Harish Mambady For Advertisements Contact: 9448548127

ಜಾಹೀರಾತು


ಭಾನುವಾರ ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್‌ಜಿಎಸ್‌ಆರ್‌ವೈನ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ತಾಲೂಕು ಮಟ್ಟದ ಆಚರಣೆ ಉದ್ಘಾಟಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಾದ್ದು ಇಂದಿನ ಅನಿವಾರ್ಯತೆ. ಇಚ್ಛಾಶಕ್ತಿ ಇದ್ದಾಗ ವ್ಯಕ್ತಿ ಶಕ್ತಿಯಾಗಬಹುದು ಎಂಬುದನ್ನು ಜಗತ್ತಿಗೇ ತೋರಿಸಿಕೊಟ್ಟರು ಎಂದವರು ಹೇಳಿದರು . ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ನಾರಾಯಣ ಗೌಡ, ರಾಮನ ಆದರ್ಶಗಳನ್ನು ಜಗತ್ತಿಗೆ ಸಾರಿದ ಮಹರ್ಷಿ ವಾಲ್ಮೀಕಿಯ ಕುರಿತು ಅಧ್ಯಯನ ಅಗತ್ಯ ಎಂದರು.
ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಜಿಪಂ ಸದಸ್ಯ ತುಂಗಪ್ಪ ಬಂಗೇರ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಉಪಸ್ಥಿತರಿದ್ದರು.

ಜಾಹೀರಾತು

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್ ಸ್ವಾಗತಿಸಿದರು. ಆಶ್ರಮ ಶಾಲೆಯ ಮೇಲ್ವಿಚಾರಕ ಪ್ರಸಾದ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗ್ರಾಮೀಣ ಮಟ್ಟದಲ್ಲೂ ವಾಲ್ಮೀಕಿ ಸಂದೇಶ ರವಾನೆ: ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*